Back to Top

ಅರ್ಜುನ್ ಗುರೂಜಿ ಆಶೀರ್ವಾದ ಪಡೆದ 'ಎಲ್ಲಿಗೆ ಪಯಣ ಯಾವುದೋ ದಾರಿ' ಚಿತ್ರತಂಡ

SSTV Profile Logo SStv October 29, 2024
ಅರ್ಜುನ್ ಗುರೂಜಿ ಆಶೀರ್ವಾದ ಪಡೆದ ಚಿತ್ರತಂಡ
ಅರ್ಜುನ್ ಗುರೂಜಿ ಆಶೀರ್ವಾದ ಪಡೆದ ಚಿತ್ರತಂಡ
ಅರ್ಜುನ್ ಗುರೂಜಿ ಆಶೀರ್ವಾದ ಪಡೆದ 'ಎಲ್ಲಿಗೆ ಪಯಣ ಯಾವುದೋ ದಾರಿ' ಚಿತ್ರತಂಡ ಅಭಿಮನ್ಯು ಕಾಶೀನಾಥ್ ಅಭಿನಯದ 'ಎಲ್ಲಿಗೆ ಪಯಣ ಯಾವುದೋ ದಾರಿ' ಚಿತ್ರ ಪ್ರೇಕ್ಷಕರ ಮೆಚ್ಚುಗೆ ಪಡೆದು ಯಶಸ್ವೀ ಪ್ರದರ್ಶನ ಕಾಣುತ್ತಿದೆ. ಈ ಖುಷಿಯ ಸಂದರ್ಭದಲ್ಲಿ ಅಭಿಮನ್ಯು ಮತ್ತು ಚಿತ್ರತಂಡ ಮೈಸೂರಿನ ಅವಧೂತ ಅರ್ಜುನ್ ಗುರೂಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ. ಗುರೂಜಿ ಚಿತ್ರತಂಡಕ್ಕೆ ಒಳಿತಾಗಲಿ, ಚಿತ್ರವು ಯಶಸ್ವಿಯಾಗಿ ಹೆಚ್ಚು ಜನರಿಗೆ ತಲುಪಲಿ ಎಂದು ಹಾರೈಸಿದ್ದಾರೆ. ಅಭಿಮನ್ಯು, ತಾವು ತಂದೆ ಕಾಶೀನಾಥ್ ಅವರ ನೆನಪಿಗೆ ಈ ಚಿತ್ರವನ್ನು ಅರ್ಪಿಸುತ್ತಿದ್ದಾರೆ. ನಾಯಕ ನಟನಾಗಿ ಅಭಿಮನ್ಯು ಕಾಶೀನಾಥ್ ಮತ್ತು ನಾಯಕಿಯಾಗಿ ಸ್ಫೂರ್ತಿ ಉಡಿಮನೆ ನಟಿಸಿದ್ದು, ಕಥೆ-ಚಿತ್ರಕಥೆ-ಸಂಭಾಷಣೆ ಸಂಯೋಜನೆಗೆ ಕಿರಣ್ ಎಸ್ ಸೂರ್ಯ ನಿರ್ದೇಶನ ಮಾಡಿದ್ದಾರೆ. ಪ್ರಣವ್ ರಾವ್ ಸಂಗೀತ, ಸತ್ಯ ರಾಮ್ ಛಾಯಾಗ್ರಹಣ, ಮತ್ತು ಪ್ರಮೋದ್ ಮರವಂತೆ ಸಾಹಿತ್ಯ ಚಿತ್ರಕ್ಕೆ ವಿಶೇಷ ಆಕರ್ಷಣೆಯಾಗಿದೆ.