Back to Top

ಆರೋಪಿ ದರ್ಶನ್‌ಗೆ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫೋಟೋ ವೈರಲ್‌

SSTV Profile Logo SStv December 2, 2024
ದರ್ಶನ್‌ ಬಿಜಿಎಸ್  ಆಸ್ಪತ್ರೆಯ ಫೋಟೋ
ದರ್ಶನ್‌ ಬಿಜಿಎಸ್ ಆಸ್ಪತ್ರೆಯ ಫೋಟೋ
ಆರೋಪಿ ದರ್ಶನ್‌ಗೆ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫೋಟೋ ವೈರಲ್‌ ನಟ ದರ್ಶನ್, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ, ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ವೈದ್ಯರ ಪ್ರಕಾರ, ಶಸ್ತ್ರಚಿಕಿತ್ಸೆ ಅನಿವಾರ್ಯ ಎಂಬ ವರದಿ ಹಿನ್ನೆಲೆಯಲ್ಲಿ, ಬಿಜಿಎಸ್ ಆಸ್ಪತ್ರೆಯಲ್ಲಿ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ದರ್ಶನ್‌ ಅವರ ಆಸ್ಪತ್ರೆ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಫ್ಯಾನ್ಸ್ ತೀವ್ರ ಚರ್ಚೆ ಮಾಡುತ್ತಿದ್ದಾರೆ. ಅಧಿಕ ರಕ್ತದೊತ್ತಡ ಇರುವ ಕಾರಣ, ಶಸ್ತ್ರಚಿಕಿತ್ಸೆ ತಾತ್ಕಾಲಿಕವಾಗಿ ಮುಂದೂಡಲಾಗಿದೆ. ದರ್ಶನ್‌ಗೆ ಹೈಕೋರ್ಟ್ ಆರು ವಾರಗಳ ಮಧ್ಯಂತರ ಜಾಮೀನು ನೀಡಿದ್ದು, ಡಿಸೆಂಬರ್ 3ಕ್ಕೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಲಾಗಿದೆ. ದರ್ಶನ್ ಪರ ವಕೀಲರು, ಕೊಲೆ ಪ್ರಕರಣದಲ್ಲಿ ದರ್ಶನ್ ಭಾಗಿತ್ವ ಇಲ್ಲ ಎಂದು ವಾದ ಮಂಡನೆ ಮಾಡುತ್ತಿದ್ದಾರೆ. ಈ ಪ್ರಕರಣದ ತೀರ್ಮಾನಕ್ಕಾಗಿ ಎಲ್ಲರ ಕಣ್ಣೂ ಹೈಕೋರ್ಟ್‌ತ್ತ ನೆಟ್ಟಿದೆ.