ದರ್ಶನ್ ಮಧ್ಯಂತರ ಜಾಮೀನು ರದ್ದು ಕೋರಿ ಸುಪ್ರೀಂನಲ್ಲಿ ಅರ್ಜಿ ದರ್ಶನ್ಗೆ ಮುಗಿಯದ ಸಂಕಷ್ಟ


ದರ್ಶನ್ ಮಧ್ಯಂತರ ಜಾಮೀನು ರದ್ದು ಕೋರಿ ಸುಪ್ರೀಂನಲ್ಲಿ ಅರ್ಜಿ ದರ್ಶನ್ಗೆ ಮುಗಿಯದ ಸಂಕಷ್ಟ ನಟ ದರ್ಶನ್ಗೆ ಬೆನ್ನು ನೋವಿನ ಕಾರಣ ಹೇಳಿ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದ್ದು, ಅದನ್ನು ರದ್ದು ಮಾಡಲು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ದರ್ಶನ್ ಅವರು ಬೆನ್ನು ನೋವಿಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳದೇ ಇದ್ದರೆ ಪಾರ್ಶವಾಯು ಬರಬಹುದೆಂದು ವೈದ್ಯರು ಸೂಚಿಸಿದ್ದು, ಈ ಹಿನ್ನೆಲೆಯಲ್ಲಿ ಜಾಮೀನು ಪಡೆದಿದ್ದರು.
ಪ್ರಸಕ್ತ ಸಮಯದಲ್ಲಿ ದರ್ಶನ್ ಫಿಸಿಯೋಥೆರಪಿಗೆ ಒಳಗಾಗಿದ್ದು, ಶೀಘ್ರ ಶಸ್ತ್ರಚಿಕಿತ್ಸೆಗೆ ತಯಾರಿ ನಡೆಸುತ್ತಿದ್ದಾರೆ. ಆದರೆ, ರಾಜ್ಯ ಸರ್ಕಾರ ಈ ಜಾಮೀನು ರದ್ದತಿ ಕೋರಿ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಿದೆ.
ಇದೀಗ, ಡಿಸೆಂಬರ್ 6 ಅಥವಾ 9 ರಂದು ಈ ಅರ್ಜಿಯ ವಿಚಾರಣೆ ನಡೆಯುವ ಸಾಧ್ಯತೆ ಇದೆ. ದರ್ಶನ್ ಪರ ವಕೀಲರು, ಅವರ ಆರೋಗ್ಯದ ಗಂಭೀರತೆಯನ್ನು ಹೈಕೋರ್ಟ್ಗೆ ಮನವಿ ಮಾಡಿದ್ದಾರೆ.
ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಅವರ ತಂಡದ ವಿರುದ್ಧದ ಆರೋಪಗಳು ಈ ಚರ್ಚೆಯ ಹಿನ್ನಲೆಯಲ್ಲಿ ಮತ್ತಷ್ಟು ತೀವ್ರತೆ ಪಡೆದುಕೊಂಡಿವೆ.
Related posts
Trending News
ಹೆಚ್ಚು ನೋಡಿ
ಟ್ರೆಂಡಿಂಗ್ ಸುದ್ದಿ
‘ಕಥೆ ಇದ್ದರೆ ಹೇಳಿ ಸಿನಿಮಾ ಮಾಡೋಣ’ – ಅಕ್ಷಯ್ ಕುಮಾರ್ನ ಸ್ಪೆಷಲ್ ರಿಕ್ವೆಸ್ಟ್ ರಾಜ್ ಬಿ ಶೆಟ್ಟಿಗೆ
