Back to Top

ನಟ ದರ್ಶನ್‌ಗೆ ಬಳ್ಳಾರಿ ಜೈಲಿನಿಂದ ಬಿಡುಗಡೆಯ ಸಿಹಿ ಸುದ್ಧಿ ಅಭಿಮಾನಿಗಳಲ್ಲಿ ಸಂಭ್ರಮ

SSTV Profile Logo SStv October 30, 2024
ನಟ ದರ್ಶನ್‌ಗೆ ಬಳ್ಳಾರಿ ಜೈಲಿನಿಂದ ಬಿಡುಗಡೆ
ನಟ ದರ್ಶನ್‌ಗೆ ಬಳ್ಳಾರಿ ಜೈಲಿನಿಂದ ಬಿಡುಗಡೆ
ನಟ ದರ್ಶನ್‌ಗೆ ಬಳ್ಳಾರಿ ಜೈಲಿನಿಂದ ಬಿಡುಗಡೆಯ ಸಿಹಿ ಸುದ್ಧಿ ಅಭಿಮಾನಿಗಳಲ್ಲಿ ಸಂಭ್ರಮ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ನಟ ದರ್ಶನ್ ಅವರಿಗೆ ಕರ್ನಾಟಕ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ನೀಡಿದ್ದು, ಈ ಸುದ್ದಿ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲೇ ತಲುಪಿದ ಅಂತದಲ್ಲಿ ಸಂತಸ ಉಂಟುಮಾಡಿದೆ. ಹೈ ಸೆಕ್ಯೂರಿಟಿ ಸೆಲ್‌ನಲ್ಲಿರುವ ದರ್ಶನ್, ತಕ್ಷಣ ಜೈಲು ಸಿಬ್ಬಂದಿಯಿಂದ ವಿಚಾರ ತಿಳಿದು ಸಂತಸ ವ್ಯಕ್ತಪಡಿಸಿದ್ದಾರೆ. ಇಂದು ಮಧ್ಯಾಹ್ನ 11:30ರ ಬಳಿಕ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮತ್ತು ಕುಟುಂಬಸ್ಥರು ಜೈಲಿಗೆ ಬರುವ ನಿರೀಕ್ಷೆಯಿದೆ. ಜಾಮೀನು ಶೂರಿಟಿ ಪೂರ್ಣಗೊಂಡು, ದರ್ಶನ್ ಅವರ ಬಿಡುಗಡೆ ಇಂದು ಸಂಜೆ ದೃಢವಾಗಿದೆ. ಈ ಬೆನ್ನಲ್ಲೇ ಜೈಲಿನಲ್ಲಿರುವ ಇತರ ಕೈದಿಗಳು ತಮ್ಮ ನೆಚ್ಚಿನ ನಟನನ್ನು ನೋಡಲು ಒತ್ತಾಯಿಸುತ್ತಿದ್ದು, ಜೈಲಾಧಿಕಾರಿಗಳಿಗೆ ತೆಲೆನೋವಾಗಿದೆಯಂತೆ. ಬಳ್ಳಾರಿ ಜೈಲು ಮುಂಭಾಗದಲ್ಲಿ ಅಭಿಮಾನಿಗಳ ದಂಡು ಕೂಡ ಒಟ್ಟುಗೂಡಿದ್ದು, ದರ್ಶನ್ ಗುಣಮುಖರಾಗಲಿ ಎಂಬ ಹಾರೈಕೆಗಳೊಂದಿಗೆ ತಮ್ಮ ನೆಚ್ಚಿನ ನಟನನ್ನು ಬೆಂಬಲಿಸುತ್ತಿದ್ದಾರೆ.