Back to Top

ಸಾಹಸಸಿಂಹ ವಿಷ್ಣುವರ್ಧನ್‌ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ: ಅನಿರುದ್ಧ್ ಜಟ್ಕರ್ ಮನವಿ

SSTV Profile Logo SStv July 18, 2025
ವಿಷ್ಣುವರ್ಧನ್​ಗೆ ‘ಕರ್ನಾಟಕ ರತ್ನ’ ನೀಡುವಂತೆ ಅನಿರುದ್ಧ್ ಜತ್ಕರ್ ಮನವಿ
ವಿಷ್ಣುವರ್ಧನ್​ಗೆ ‘ಕರ್ನಾಟಕ ರತ್ನ’ ನೀಡುವಂತೆ ಅನಿರುದ್ಧ್ ಜತ್ಕರ್ ಮನವಿ

ದಿವಂಗತ ನಟ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ 75ನೇ ಜನ್ಮದಿನದ ಹಿನ್ನೆಲೆಯಲ್ಲಿ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಅವರ ಅಳಿಯ ಹಾಗೂ ನಟ ಅನಿರುದ್ಧ್ ಜಟ್ಕರ್ ಮನವಿ ಮಾಡಿದ್ದಾರೆ.

ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಈ ಕುರಿತಾಗಿ ಅಭಿಮಾನಿಗಳ ಆಶಯವನ್ನು ವ್ಯಕ್ತಪಡಿಸಿದರು. ಸೆಪ್ಟೆಂಬರ್ 18 ರಂದು ವಿಷ್ಣುವರ್ಧನ್ ಅವರ 75ನೇ ಜನ್ಮದಿನವಾಗಿದ್ದು, ಈ ವಿಶೇಷ ಸಂದರ್ಭದಲ್ಲಿ ಅವರು ಈ ಗೌರವಕ್ಕೆ ಅರ್ಹರಾಗಿದ್ದಾರೆಂದು ಅನಿರುದ್ಧ್ ತಿಳಿಸಿದರು.

ವಿಷ್ಣುವರ್ಧನ್ ಅವರು ಕನ್ನಡ ಚಿತ್ರರಂಗ ಹಾಗೂ ಕಲಾ ಲೋಕಕ್ಕೆ ನೀಡಿರುವ ಸೇವೆ ಅಮೂಲ್ಯವಾಗಿದೆ. ಇದುವರೆಗೆ ಕೇಂದ್ರ ಸರ್ಕಾರದಿಂದಲೂ ಪದ್ಮಶ್ರೀ ದೊರಕದಂತೆಯೇ, ರಾಜ್ಯದಿಂದಲೂ ಕರ್ನಾಟಕ ರತ್ನ ಸಿಕ್ಕಿಲ್ಲ ಎಂಬುದು ಅವರ ಅಭಿಮಾನಿಗಳಿಗೆ ನೋವಿನ ವಿಷಯವಾಗಿದೆ.

ಅದುಗಾಗಿ ಈ ಬಾರಿ ವಿಷ್ಣುವರ್ಧನ್ ಅವರ ಶತಮಾನೋತ್ಸವದತ್ತ ದಾರಿತೋರುವ 75ನೇ ವರ್ಷದ ಹೆಮ್ಮೆಯ ಕ್ಷಣದಲ್ಲಿ ಈ ಗೌರವ ನೀಡಬೇಕು ಎಂಬುದು ಅನಿರುದ್ಧ್ ಜಟ್ಕರ್ ಹಾಗೂ ಲಕ್ಷಾಂತರ ಅಭಿಮಾನಿಗಳ ಆಶಯವಾಗಿದೆ.