Back to Top

ದರ್ಶನ್ ನೋಡಲು ಬಳ್ಳಾರಿ ಜೈಲಿಗೆ ಪತ್ನಿ ವಿಜಯಲಕ್ಷ್ಮಿ ಭೇಟಿ

SSTV Profile Logo SStv September 30, 2024
ಬಳ್ಳಾರಿ ಜೈಲಿಗೆ ಪತ್ನಿ ವಿಜಯಲಕ್ಷ್ಮಿ ಭೇಟಿ
ಬಳ್ಳಾರಿ ಜೈಲಿಗೆ ಪತ್ನಿ ವಿಜಯಲಕ್ಷ್ಮಿ ಭೇಟಿ
ದರ್ಶನ್ ನೋಡಲು ಬಳ್ಳಾರಿ ಜೈಲಿಗೆ ಪತ್ನಿ ವಿಜಯಲಕ್ಷ್ಮಿ ಭೇಟಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್‌ರನ್ನು ನೋಡಲು ಬಳ್ಳಾರಿ ಜೈಲಿಗೆ ಪತ್ನಿ ವಿಜಯಲಕ್ಷ್ಮಿ ಭೇಟಿ ನೀಡಿದ್ದಾರೆ. ಕಾನೂನು ಸಮರದ ಕುರಿತು ಚರ್ಚಿಸಲು ವಿಜಯಲಕ್ಷ್ಮಿ 6ನೇ ಬಾರಿ ಜೈಲಿಗೆ ಆಗಮಿಸಿದ್ದಾರೆ. ದರ್ಶನ್ ನೋಡಲು ಜೈಲಿಗೆ ಭೇಟಿ ಕೊಟ್ಟಿರುವ ವಿಜಯಲಕ್ಷ್ಮಿ ಜೊತೆ ದಿನಕರ್ ತೂಗುದೀಪ, ನಟ ಧನ್ವೀರ್ ಗೌಡ, ವಿಜಯಲಕ್ಷ್ಮಿ ಅವರ ತಂಗಿಯ ಗಂಡ ಸುಶಾಂತ್ ನಾಯ್ಡು ಆಗಮಿಸಿದ್ದಾರೆ. ಈ ವೇಳೆ, ಬಟ್ಟೆ ಮತ್ತು ಬೇಕರಿ ತಿನಿಸುಗಳನ್ನು ದರ್ಶನ್‌ಗಾಗಿ ಎರಡು ಬ್ಯಾಗ್‌ಗಳನ್ನು ತಂದಿದ್ದಾರೆ. ಅಂದಹಾಗೆ, ಜೂನ್ 11ರಂದು ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿತ್ತು.