Back to Top

ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅ.10ಕ್ಕೆ, ಪವಿತ್ರಾ ಅರ್ಜಿ ತೀರ್ಪು ಅ.14ಕ್ಕೆ

SSTV Profile Logo SStv October 9, 2024
ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅ.10ಕ್ಕೆ
ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅ.10ಕ್ಕೆ
ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅ.10ಕ್ಕೆ, ಪವಿತ್ರಾ ಅರ್ಜಿ ತೀರ್ಪು ಅ.14ಕ್ಕೆ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ತೂಗುದೀಪ ಅವರ ಜಾಮೀನು ಅರ್ಜಿ ವಿಚಾರಣೆ ಅಕ್ಟೋಬರ್ 10ಕ್ಕೆ ಮುಂದೂಡಲಾಗಿದೆ. ಪವಿತ್ರಾ ಗೌಡ ಹಾಗೂ ಇತರೆ ನಾಲ್ಕು ಆರೋಪಿಗಳ ಜಾಮೀನು ಅರ್ಜಿಯ ತೀರ್ಪು ಅಕ್ಟೋಬರ್ 14ರಂದು ಪ್ರಕಟವಾಗಲಿದೆ. ಬುಧವಾರ (ಅ.09) ನಡೆದ ವಿಚಾರಣೆಯಲ್ಲಿ ಎಸ್‌ಪಿಪಿ ಪ್ರಸನ್ನ ಕುಮಾರ್ ದರ್ಶನ್ ಮತ್ತು ಅವರ ಸಹ ಆರೋಪಿಗಳ ವಿರುದ್ಧ ಸಾಕ್ಷ್ಯಗಳನ್ನು ನ್ಯಾಯಾಲಯದ ಮುಂದೆ ಮಂಡಿಸಿದ್ದರು. ಪವಿತ್ರಾ, ದರ್ಶನ್ ಹಾಗೂ ಇತರೆ ಆರೋಪಿಗಳು ಅಪಹರಣ ಮತ್ತು ಕೊಲೆಯಲ್ಲಿ ಶಾಮೀಲಾಗಿರುವುದರಿಂದ ಅವರಿಗೆ ಜಾಮೀನು ನೀಡಬಾರದು ಎಂದು ವಾದಿಸಿದ್ದರು. ದರ್ಶನ್ ಪರ ವಕೀಲರಾದ ಸಿವಿ ನಾಗೇಶ್ ನಾಳೆ (ಅ.10) ವಾದ ಮಂಡಿಸಲು ಅಸೆ ಹಿಡಿದ ಕಾರಣ, ದರ್ಶನ್ ಜಾಮೀನು ವಿಚಾರಣೆ ನಾಳೆಗೆ ಮುಂದೂಡಲಾಯ್ತು.