ಸಾರಿಗೆ ನೌಕರರ ಮುಷ್ಕರದ ಬಿಸಿ: ಹಿರಿಯ ನಟ ಹೊನ್ನವಳ್ಳಿ ಕೃಷ್ಣಿಗೂ ತೊಂದರೆ


ಸಾರಿಗೆ ನೌಕರರ ಮುಷ್ಕರದ ಪರಿಣಾಮ ಜನ ಸಾಮಾನ್ಯರಿಗಷ್ಟೆ ಅಲ್ಲದೇ ಕನ್ನಡದ ಹಿರಿಯ ನಟ ಹೊನ್ನವಳ್ಳಿ ಕೃಷ್ಣ ಅವರಿಗೂ ತಟ್ಟಿದೆ. ವೈಟ್ಫೀಲ್ಡ್ನಿಂದ ಮೆಟ್ರೋ ಮೂಲಕ ಮೆಜೆಸ್ಟಿಕ್ಗೆ ಬಂದಿದ್ದ ಹೊನ್ನವಳ್ಳಿ ಕೃಷ್ಣ ಮತ್ತು ಅವರ ಪತ್ನಿ, ಮಾದನಾಯಕನಹಳ್ಳಿಗೆ ಹೋಗಲು ಬಸ್ಗಾಗಿ ನಿರೀಕ್ಷಿಸುತ್ತಿದ್ದರು. ಆದರೆ ಬಸ್ಗಳು ರಸ್ತೆಗೆ ಇಳಿಯದ ಕಾರಣ ಅವರು ಕೊನೆಗೆ ಕ್ಯಾಬ್ ಮೂಲಕ ಹೋಗಬೇಕಾಯಿತು.
ಬಿಎಂಟಿಸಿ, ಕೆಎಸ್ಆರ್ಟಿಸಿ ಸೇರಿ ನಾಲ್ಕು ಸಾರಿಗೆ ವಿಭಾಗಗಳ ನೌಕರರು ವೇತನ ಪರಿಷ್ಕರಣೆ ಮತ್ತು ಹಿಂಬಾಕಿ ವೇತನ ಬಿಡುಗಡೆ ಸೇರಿದಂತೆ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮುಷ್ಕರಕ್ಕೆ ಇಳಿದಿದ್ದಾರೆ. ಇದರ ಪರಿಣಾಮ ಸಾರ್ವಜನಿಕರು ನಿಲ್ದಾಣಗಳಲ್ಲಿ ಪರದಾಡುವ ಸ್ಥಿತಿಗೆ ತಲುಪಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ನಟ ಕೃಷ್ಣ, “ಈ ತರಹದ ಬಂದ್ ಆಗಬಾರದಾಗಿತ್ತು. ಜನರಿಗೆ ತುಂಬಾ ತೊಂದರೆ ಆಗಿದೆ. ಇಂಥ ದುಸ್ಥಿತಿ ಮರುಕಳಿಸಬಾರದು” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
Trending News
ಹೆಚ್ಚು ನೋಡಿ
ಟ್ರೆಂಡಿಂಗ್ ಸುದ್ದಿ
ವಿಷ್ಣುವರ್ಧನ್ ಸಿನಿಮಾಗೆ ಡೈರೆಕ್ಷನ್ ಕೊಡಬೇಕಿತ್ತಾ ರಮೇಶ್ ಅರವಿಂದ್? ಮಿಸ್ ಆದ ಆ ಅಪರೂಪದ ಅವಕಾಶ!

ಟ್ರೆಂಡಿಂಗ್ ಸುದ್ದಿ
ಕಾಂತಾರಕ್ಕೆ ಕೈಜೋಡಿಸಿದ ಗಾಯಕ ದಿಲ್ಜಿತ್ ಸಿಂಗ್: ರಿಷಬ್ ಶೆಟ್ಟಿ ನಿಜಕ್ಕೂ ಮಾಸ್ಟರ್ಪೀಸ್ ಎಂದ ಸಿಂಗರ್
