ರಮ್ಯಾ ವಿರುದ್ಧ ಕಾನೂನು ಹೋರಾಟಕ್ಕೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮುಂದಾಗಿದ್ದಾರೆ!


ರೇಣುಕಾಸ್ವಾಮಿ ಪ್ರಕರಣ ಸಂಬಂಧ ನಟಿ ರಮ್ಯಾ ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಅಭಿಮಾನಿಗಳಿಂದ ಪಡೆಯುತ್ತಿರುವ ಅಶ್ಲೀಲ ಸಂದೇಶಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ದೂರು ನೀಡಲು ಅವರು ಸಜ್ಜಾಗಿದ್ದಾರೆ. ಇನ್ಸ್ಟಾಗ್ರಾಂನಲ್ಲಿ "ರೇಣುಕಾಸ್ವಾಮಿಗೆ ನ್ಯಾಯ ಸಿಗಲಿದೆ" ಎಂಬ ಪೋಸ್ಟ್ ಮಾಡುತ್ತಿದ್ದರೇ, ದರ್ಶನ್ ಫ್ಯಾನ್ಸ್ ಅವರನ್ನು ಗುರಿಯಾಗಿಸಿ ಕಿಡಿಕಾರಿದ್ದಾರೆ.
ಇದೀಗ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಕೂಡ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ಪ್ರಕರಣ ಕೋರ್ಟ್ನಲ್ಲಿ ವಿಚಾರಣೆಯಲ್ಲಿರುವಾಗಲೇ ರಮ್ಯಾ ದರ್ಶನ್ ವಿರುದ್ಧ ಪೋಸ್ಟ್ ಮಾಡಿದ್ದು, ನ್ಯಾಯಕ್ಕೆ ಅಡ್ಡಿಯಾಗಬಹುದು ಎಂದು ವಿಜಯಲಕ್ಷ್ಮಿ ಅಭಿಪ್ರಾಯಪಟ್ಟಿದ್ದಾರೆ. ಅದರಿಂದ, ಸೈಬರ್ ಕ್ರೈಂ ಪೊಲೀಸರಿಗೆ ರಮ್ಯಾ ವಿರುದ್ಧ ದೂರು ಸಲ್ಲಿಸಲು ಅವರು ಮುಂದಾಗಿದ್ದಾರೆ.
ರಮ್ಯಾ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ಗಳ ಸ್ಕ್ರೀನ್ಶಾಟ್ಗಳನ್ನು ಬಹಿರಂಗಪಡಿಸಿ, "ಇವರಲ್ಲೇ ಸ್ತ್ರೀದ್ವೇಷಿ ಮನೋಭಾವವಿದೆ. ಇಂಥವರಿಂದಲೇ ಸಮಾಜದಲ್ಲಿ ಹೆಣ್ಣುಮಕ್ಕಳು ಅಪಾಯಕ್ಕೊಳಗಾಗುತ್ತಿದ್ದಾರೆ," ಎಂಬ ತೀವ್ರ ಹೇಳಿಕೆಯಿಂದ ಫ್ಯಾನ್ಸ್ ಮೇಲೆ ಕಿಡಿಕಾರಿದ್ದಾರೆ.
ಈ ಎರಡೂ ಭಿನ್ನ ಅಭಿಪ್ರಾಯಗಳು ಈಗ ಸ್ಯಾಂಡಲ್ವುಡ್ನಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಕಾನೂನು ಹೋರಾಟವೇ ಮುಂದಿನ ಹೆಜ್ಜೆಯಾಗಲಿದೆ.
Related posts
Trending News
ಹೆಚ್ಚು ನೋಡಿ‘ಕಥೆ ಇದ್ದರೆ ಹೇಳಿ ಸಿನಿಮಾ ಮಾಡೋಣ’ – ಅಕ್ಷಯ್ ಕುಮಾರ್ನ ಸ್ಪೆಷಲ್ ರಿಕ್ವೆಸ್ಟ್ ರಾಜ್ ಬಿ ಶೆಟ್ಟಿಗೆ
